'ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ-ಉಪಯೋಗ'- ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

Update: 2021-09-27 17:24 GMT

ಬೆಂಗಳೂರು, ಸೆ. 27: ಅಂತರ್‍ರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ಆಡಳಿತ ತರಬೇತಿ ಸಂಸ್ಥೆಯ `ವಿಕೋಪ ನಿರ್ವಹಣಾ ಕೇಂದ್ರವು ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು' ವಿಷಯದ ಮೇಲೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಸ್ಪರ್ಧಾರ್ಥಿಗಳು ತಮ್ಮ ಪ್ರಬಂಧಗಳನ್ನು ಟೈಪ್ ಮಾಡಿ (ವರ್ಡ್ ಫಾರ್ಮೆಟ್‍ನಲ್ಲಿ) ಮಿಂಚಂಚೆ ಮೂಲಕ ಹಾಗೂ ಕೈಬರಹದಲ್ಲಿ ಬರೆಯವವರು ಪೋಸ್ಟ್ ಮೂಲಕ ಎರಡು ರೀತಿಯಲ್ಲಿ ಕಳುಹಿಸಲು ಅವಕಾಶ ನೀಡಲಾಗಿದೆ. ಪ್ರಬಂಧಗಳನ್ನು ಸ್ವೀಕರಿಸಲು ನ.15 ಕೊನೆಯ ದಿನ. ಪ್ರಬಂಧವನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಟೈಪ್ ಮಾಡಿ ವರ್ಡ್‍ಫೈಲ್ ಮೂಲಕ ಕಳುಹಿಸುವವರು atiessaycompetition@gmail ಗೆ ಕಳುಹಿಸುವುದು. ಕೈಬರಹದಲ್ಲಿ ಬರೆದ ಪ್ರಬಂಧಗಳ(ಹಾರ್ಡ್‍ಕಾಪಿ)ನ್ನು ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಲಲಿತ ಮಹಲ್ ರಸ್ತೆ, ಮೈಸೂರು-570011 ವಿಳಾಸಕ್ಕೆ ಕಳುಹಿಸಬೇಕು.

ಕನ್ನಡ ಮತ್ತು ಆಂಗ್ಲ ಭಾಷೆಯ ಪ್ರಬಂಧಗಳಿಗೆ ಪ್ರತ್ಯೇಕ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಮೊದಲ ಬಹುಮಾನ 10 ಸಾವಿರ ರೂ., ದ್ವಿತೀಯ ಬಹುಮಾನ 8 ಸಾವಿರ ರೂ. ಹಾಗೂ ತೃತೀಯ ಬಹುಮಾನ 5ಸಾವಿರ ರೂ.ಗಳು ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಹಮ್ಮಿಕೊಳ್ಳುವ ಕಾರ್ಯಾಗಾರದಲ್ಲಿ ಬಹುಮಾನ ನೀಡಲಾಗುವುದು. ಸ್ಪರ್ಧಾರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಇರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ಮಾಹಿತಿಯನ್ನುhttp://atimysore.gov.in ವೆಬ್‍ಸೈಟ್‍ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಮೊಬೈಲ್ ಸಂ. 9740768931 ಮತ್ತು 99012 12215 ಇವರನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News