ಸಿದ್ದರಾಮಯ್ಯ ಮನಸೋ ಇಚ್ಛೆ ಮಾತನಾಡುವುದು ಸಲ್ಲ: ಸಚಿವ ಆಚಾರ್ ಹಾಲಪ್ಪ

Update: 2021-09-27 19:19 GMT

ರಾಯಚೂರು, ಸೆ. 27: `ವಾಕ್ ಸ್ವಾತಂತ್ರ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ಅವರ ರೀತಿಯಲ್ಲಿ ನಾವೂ ಮಾತನಾಡಲು ಆಗುವುದಿಲ್ಲ' ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಕೋಮುವಾದಿ ಪಕ್ಷ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಅವರು ಸರಿಯಾಗಿ ಮಾತನಾಡಬೇಕು ಎಂದು ಸಲಹೆ ಮಾಡಿದರು.

ಶೀಘ್ರದಲ್ಲಿ ಹೊಸ ಮರಳು ನೀತಿ ಜಾರಿಗೆ ತಂದು ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲಾಗುವುದು.  ಮರಳು ಸರಳೀಕರಣ ನೀತಿ ಸಂಪುಟದ ಮುಂದಿದೆ. ಒಪ್ಪಿಗೆ ಸಿಕ್ಕ ಕೂಡಲೇ ಜಾರಿಯಾಗುತ್ತದೆ. ನೀತಿ ಜಾರಿಯಾದ ಕೂಡಲೇ ಅಕ್ರಮಗಳಿಗೆ ಕಡಿವಾಣ ಬೀಳುತ್ತದೆ. ಅಲ್ಲದೆ ನೇರವಾಗಿ ಗ್ರಾಹಕರಿಗೆ ಮರಳು ದೊರೆಯುವ ವ್ಯವಸ್ಥೆ ಮಾಡಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News