ರಾಜ್ಯಾದ್ಯಂತ 629 ಕೊರೋನ ಪ್ರಕರಣ ದೃಢ, 17 ಮಂದಿ ಸಾವು

Update: 2021-09-28 14:51 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.28: ರಾಜ್ಯದಲ್ಲಿ ಮಂಗಳವಾರ 629 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 17 ಜನರು ಸೋಂಕಿಗೆ ಬಲಿಯಾಗಿದ್ದು, 893 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,74,528ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,763ಕ್ಕೆ ತಲುಪಿದೆ.  

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 12,634ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

17 ಸೋಂಕಿತರು ಬಲಿ: ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 6, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 2, ಹಾಸನ 2, ಕೋಲಾರ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 629 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 16, ಬೆಂಗಳೂರು ನಗರ 229, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 17, ಚಿತ್ರದುರ್ಗ 5, ದಕ್ಷಿಣ ಕನ್ನಡ 96, ದಾವಣಗೆರೆ 1, ಧಾರವಾಡ 7, ಹಾಸನ 27, ಹಾವೇರಿ 2, ಕೊಡಗು 30, ಕೋಲಾರ 5, ಮಂಡ್ಯ 22, ಮೈಸೂರು 58, ರಾಮನಗರ 2, ಶಿವಮೊಗ್ಗ 14, ತುಮಕೂರು 22, ಉಡುಪಿ 39, ಉತ್ತರ ಕನ್ನಡ  ಜಿಲ್ಲೆಯಲ್ಲಿ 16  ಪ್ರಕರಣ ಪತ್ತೆಯಾಗಿವೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News