ಪಂಜಾಬ್ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಕೇರಳಕ್ಕೆ ತೆರಳಿದ ರಾಹುಲ್ ಗಾಂಧಿ

Update: 2021-09-29 06:34 GMT

ಹೊಸದಿಲ್ಲಿ: ನವಜೋತ್ ಸಿಂಗ್ ಸಿಧು ಮಂಗಳವಾರ  ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ  ಕಾಂಗ್ರೆಸ್  ಪಕ್ಷವು ಪಂಜಾಬ್‌ನಲ್ಲಿ ಹೊಸ ನಾಯಕತ್ವ ಬಿಕ್ಕಟ್ಟಿನ ವಿರುದ್ಧ ಹೋರಾಡುತ್ತಿದ್ದರೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಕೇರಳಕ್ಕೆ ತೆರಳಿದರು.  

 ದಕ್ಷಿಣ ರಾಜ್ಯದ ಲೋಕಸಭಾ ಸಂಸದರಾದ ಗಾಂಧಿ ಅವರು ಕೋಝಿಕ್ಕೋಡ್ ಹಾಗೂ  ಮಲಪ್ಪುರಂಗೆ ಪೂರ್ವ ನಿಗದಿತ ಒಂದು ದಿನದ ಭೇಟಿಯಲ್ಲಿದ್ದಾರೆ. ಈ ಸಮಯದಲ್ಲಿ ಅವರು ಘಟಕಗಳೊಂದಿಗೆ ಸಂವಹನ ನಡೆಸುತ್ತಾರೆ ಹಾಗೂ  ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ರಾಹುಲ್ ಅವರು ಗುರುವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News