ತಾಲಿಬಾನಿಗಳು ಬಿಜೆಪಿಯಲ್ಲೂ ಇದ್ದಾರೆ: ಎಚ್. ವಿಶ್ವನಾಥ್

Update: 2021-09-29 13:29 GMT
 ಎಚ್. ವಿಶ್ವನಾಥ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ತಾಲಿಬಾನ್ ಹೇಳಿಕೆ ಬಳಿಕ ಬಿಜೆಪಿ, ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ಉಂಟಾಗಿದ್ದು, ಈ ಕುರಿತು ಬಿಜೆಪಿ ಮೇಲ್ಮನೆ ಸದಸ್ಯ, ಮಾಜಿ ಸಚಿವ ಎಚ್. ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 

ಪ್ರೆಸ್‍ಕ್ಲಬ್‍ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 'ಸಂಘಟನೆಗಳ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು. ತಾಳಿಬಾನಿಗಳು ಯಾವ ಪಕ್ಷದಲ್ಲಿ ಇಲ್ಲ, ದೇಶದ ಎಲ್ಲ ಪಕ್ಷದಲ್ಲಿ ಇದ್ದಾರೆ. ಬಿಜೆಪಿಯಲ್ಲೂ ಇದ್ದಾರೆ' ಎಂದು ಹೇಳಿದ್ದಾರೆ.  

ಎಸ್ಟಿ ಮೀಸಲಾತಿ ಪಟ್ಟಿಗೆ ಸೇರಿಸುವ ಕುರಿತಾಗಿ ಮಾತನಾಡಿದ ಅವರು, ಎಲ್ಲಾ ಕುರುಬ ನಾಯಕರು ಕುರುಬರನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಕುರುಬ ಪೀಠದ ಮಠಾಧಿಪತಿಗಳೇ ಕುರುಬರನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದ್ದರಿಂದ ಈ ವಿಚಾರವಾಗಿ ಸಮುದಾಯದ ಮುಖಂಡರೊಂದಿಗೆ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News