ಅಮರಿಂದರ್ ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗಿದೆ :ಕಾಂಗ್ರೆಸ್

Update: 2021-10-01 08:29 GMT

ಹೊಸದಿಲ್ಲಿ: ತನ್ನನ್ನು ಪಕ್ಷದಲ್ಲಿ ಚೆನ್ನಾಗಿ ನಡೆಸಿಕೊಳ್ಳಲಿಲ್ಲ ಎಂಬ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಆರೋಪವು ನಿಜವಲ್ಲ. ಕ್ಯಾಪ್ಟನ್ ಒತ್ತಡದಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಇಂದು ಹೇಳಿದೆ.

 "ಅವರು ಅವಮಾನಿತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷವು ಅವರಿಗೆ ಯಾವಾಗಲೂ ಗೌರವವನ್ನು ನೀಡಿದೆ ಹಾಗೂ  ಅವರನ್ನು ಗೌರವದಿಂದ ನಡೆಸಿಕೊಂಡಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ" ಎಂದು ಕಾಂಗ್ರೆಸ್ ನ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ಇಂದು ಸುದ್ದಿಗಾರರಿಗೆ ತಿಳಿಸಿದರು.

ತನ್ನನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ತೊರೆಯುವುದಾಗಿ  ಅಮರಿಂದರ್ ಸಿಂಗ್ ಗುರುವಾರ  ಎನ್‌ಡಿಟಿವಿಗೆ ತಿಳಿಸಿದ್ದರು.

ದಿಲ್ಲಿಯಲ್ಲಿ ಬಿಜೆಪಿ ನಾಯಕ ಹಾಗೂ  ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ  ಕಾಂಗ್ರೆಸ್ ನಾಯಕ ಸಿಂಗ್ ಪಕ್ಷಕ್ಕೆ ಆಘಾತ ನೀಡಿದ್ದರು, ಅವರು ಬಿಜೆಪಿಗೆ ಸೇರಬಹುದು ಎಂಬ ಊಹಾಪೋಹವನ್ನು ಹುಟ್ಟುಹಾಕಿದ್ದರು. ಆದರೆ ಅವರು ಯಾವುದೇ ಪಕ್ಷಕ್ಕೆ ಸೇರುವುದನ್ನು ತಳ್ಳಿಹಾಕಿದ್ದಾರೆ ಹಾಗೂ ಶಾ ಅವರೊಂದಿಗಿನ ಭೇಟಿಯು ಸೌಜನ್ಯದ ಭೇಟಿ ಎಂದು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News