ಪುರಾತನ ವಿಗ್ರಹ ಕಳವು ಪ್ರಕರಣ : ಮೂವರು ಆರೋಪಿಗಳ ಸೆರೆ

Update: 2021-10-03 09:22 GMT

ಮಡಿಕೇರಿ : ಪುರಾತನ ಪಂಚಲೋಹದ ಹಾಗೂ ಕಂಚಿನ ವಿಗ್ರಹಗಳು, ಕೃಷಿ ಯಂತ್ರೋಪಕರಣಗಳು ಸೇರಿದಂತೆ ಕಾಫಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ನೀರುಕೊಲ್ಲಿಯ ಲವ, ಮಂಜು ಹಾಗೂ ಮೇಕೇರಿಯ ರೋಹಿತ್ ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಿಂದ ಕಾರು ಸಹಿತ ಕಳವು ಮಾಡಿದ್ದ ಸುಮಾರು 13.70 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಕರ್ಣಂಗೇರಿ ಗ್ರಾಮದಲ್ಲಿ 2020 ನವೆಂಬರ್ 7 ರಂದು ರಾತ್ರಿ ಆಶಾಕುಮಾರ್ ಎಂಬವರ ಮನೆಗೆ ನುಗ್ಗಿ ಸುಮಾರು 10.50 ಲಕ್ಷ ರೂ. ಮೌಲ್ಯದ ಪುರಾತನ ಪಂಚಲೋಹ ಹಾಗೂ ಕಂಚಿನ ವಿಗ್ರಹ ಕಳವಾಗಿತ್ತು.

ಬಂಧಿತರಿಂದ ವಿಗ್ರಹಗಳು ಮಾತ್ರವಲ್ಲದೆ ಕೃತ್ಯಕ್ಕೆ ಬಳಸಿದ್ದ ಕಾರು ಸೇರಿದಂತೆ ವಿವಿಧೆಡೆ ಕಳ್ಳತನ ಮಾಡಿದ್ದ ಕೃಷಿ ಯಂತ್ರೋಪಕರಣಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News