ಶೌಚಗುಂಡಿ ಸ್ವಚ್ಛತಾ ಕಾರ್ಮಿಕರ ಸಮೀಕ್ಷೆಗೆ 2 ತಿಂಗಳ ಗಡುವು ನೀಡಿದ ಹೈಕೋರ್ಟ್

Update: 2021-10-04 15:31 GMT

ಬೆಂಗಳೂರು, ಅ.4: ಮ್ಯಾನುಯೆಲ್ ಸ್ಕ್ಯಾವೆಂಜರ್ಸ್‍ಗಳ(ಕೈಗಳಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಕಾರ್ಮಿಕರ) ಸಮಗ್ರ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮನುಷ್ಯರಿಂದ ಮ್ಯಾನ್‍ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರಕಾರಕ್ಕೆ ನಿರ್ದೇಶಿಸಲು ಕೋರಿ ಎಐಸಿಸಿಟಿಯುನ ಕರ್ನಾಟಕ ಘಟಕ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನೇತತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ, ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ತಮಟೆ ಎಂಬ ಸ್ವಯಂಸೇವಾ ಸಂಸ್ಥೆ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿ, ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಲು ನ್ಯಾಯಾಲಯ ಹಿಂದೆಯೇ ನಿರ್ದೇಶನ ನೀಡಿದೆ. ಆದರೆ, ಈವರೆಗೆ ಆ ಕಾರ್ಯ ಆಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, `ಮ್ಯಾನುಯೆಲ್ ಸ್ಕಾವೆಂಜಿಂಗ್‍ಗಾಗಿ ಉದ್ಯೋಗ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ-2020ರ ಪ್ರಕಾರ ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಲು ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಸರಕಾರ ಹೇಳಿದೆ. ಹೀಗಾಗಿ, ಎರಡು ತಿಂಗಳಲ್ಲಿ ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ಪೂರ್ಣಗೊಳಿಸುವಂತೆ  ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತು.

ಅಲ್ಲದೇ, ರಾಮನಗರದಲ್ಲಿ ಶೌಚಗುಂಡಿಯಲ್ಲಿ ಬಿದ್ದು ಮತಪಟ್ಟ ಕಾರ್ಮಿಕರ ಮಕ್ಕಳಿಗೆ 1 ಸಾವಿರ ರೂ. ಸ್ಕಾಲರ್‍ಶಿಪ್ ನೀಡಲಾಗಿದೆ ಎಂದು ಸರಕಾರ ಹೇಳಿರುವುದು `ಕಣ್ಣೊರೆಸುವ ತಂತ್ರ'ವಾಗಿದೆ. ಮತ್ತೊಂದು ಕಡೆ 10 ಸಾವಿರ ಸ್ಕಾಲರ್‍ಶಿಪ್ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಸ್ಕಾಲರ್‍ಶಿಪ್ ತಿಂಗಳಿಗೆ ಅಥವಾ ವರ್ಷಕ್ಕೆ ಒಂದು ಬಾರಿ ಕೊಡಲಾಗುತ್ತದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಮನುಷ್ಯರಿಂದ ಮ್ಯಾನ್‍ಹೋಲ್ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಅನ್ವಯ ಸ್ಕಾಲರ್‍ಶಿಪ್ ನೀಡುವುದು ಸರಕಾರದ ಬಾಧ್ಯತೆಯಾಗಿದೆ. ಆದರೆ, ಇದರಲ್ಲಿ ತಾರತಮ್ಯ ಇರಕೂಡದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸ್ಕಾಲರ್‍ಶಿಪ್ ಹಾಗೂ ಪರಿಹಾರಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಯೋಜನೆ ರೂಪಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿತು.

ರಾಮನಗರದಲ್ಲಿ ಶೌಚಗುಂಡಿಗೆ ಇಳಿದು ಮತಪಟ್ಟ ಮೂವರು ಹಾಗೂ ಕಲಬುರಗಿಯ ಕೈಲಾಶ್ ನಗರದಲ್ಲಿ ಶೌಚಗುಂಡಿ ಸ್ಚಚ್ಛಗೊಳಿಸುವ ವೇಳೆ ಮತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಸ್ಥರಿಗೆ 30 ದಿನಗಳಲ್ಲಿ ಪರ್ಯಾಯ ಉದ್ಯೋಗ ನೀಡಬೇಕು. ಮ್ಯಾನುಯೆಲ್ ಸ್ಕಾವೆಂಜರ್ಸ್‍ಗಳಿಗೆ ನೀಡಲಾಗುವ ಉಪಕರಣಗಳ ಸಮಗ್ರ ಪಟ್ಟಿಯಲ್ಲಿ  30 ದಿನಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News