ಸಿಂದಗಿಯಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ; ಈಶ್ವರ ಖಂಡ್ರೆ
Update: 2021-10-05 10:53 GMT
ಸಿಂದಗಿ: ಉಪಚುನಾವಣೆಯಲ್ಲಿ ಸಿಂದಗಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದಲ್ಲಿ ಗೆಲುವು ನಿಶ್ಚಿತ ಎಂದು ಬಾಲ್ಕಿ ಶಾಸಕ ಈಶ್ವರ ಖಂಡ್ರೆ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳು ಒಟ್ಟಾಗಿ ಉಪ ಚುನಾವಣೆ ಎದುರಿಸುತ್ತೇವೆ. ಸಿಂದಗಿ ಮತ್ತು ಹಾನಗಲ್ ನಾವೇ ಗೆದ್ದೇ ಗೆಲ್ಲುತ್ತೇವೆ ಎಂದರು.
ಇನ್ನು ಸಿಂದಗಿ ಕೈ ಅಭ್ಯರ್ಥಿ ಅಶೋಕ ಮನಗೂಳಿಯನ್ನ ಒಮ್ಮತ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಅಕ್ಟೋಬರ್ 8 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಾಮ ಪತ್ರ ಸಲ್ಲಿಸುತ್ತೇವೆ. ಆದರೆ, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಈ ಬಾರಿ ಭ್ರಷ್ಟ ಬಿಜೆಪಿ ಪಕ್ಷ ಹಾಗೂ ದುರಾಡಳಿತಕ್ಕೆ ಈ ಬಾರಿ ಮತದಾರ ತಕ್ಕ ಪಾಠ ಕಲಿಸುತ್ತಾರೆ ಎಂದರು.