ಸತ್ಯ ಹೇಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ:ಎಚ್.ಡಿ.ಕುಮಾರಸ್ವಾಮಿ

Update: 2021-10-05 14:11 GMT

ಬೆಂಗಳೂರು, ಅ.5: ಯಾವತ್ತಿದ್ದರೂ ಜನರಿಗೆ ಸತ್ಯ ಗೊತ್ತಾಗಲೇಬೇಕು. ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ. ನನ್ನ ಹೇಳಿಕೆ ಯಾರ ಪರವೂ ಇಲ್ಲ ಅಥವಾ ವಿರೋಧವೂ ಇಲ್ಲ. ಸತ್ಯ ಚರ್ಚೆ ಆಗಬೇಕು ಎಂಬುದು ನನ್ನ ಅಭಿಲಾಷೆ. ನಾನು ಸತ್ಯದ ಪರ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಪ್ರಸ್ತುತ ದೇಶ ಹೋಗುತ್ತಿರುವ ಹಾದಿ ನೋಡಿದರೆ ಜನರ ಮುಂದೆ ಸತ್ಯ ಇಡುವುದು ಅತ್ಯಂತ ಅಗತ್ಯವೆಂದು ನನಗೆ ಅನಿಸಿತು. ವಾಸ್ತವವಾಗಿ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿಲ್ಲ. ಸತ್ಯ ಮುಚ್ಚಿಟ್ಟರೆ ತಮ್ಮ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ತಂದುಕೊಟ್ಟ ಮಹಾಪುರುಷರಿಗೆ ಅಪಚಾರ ಮಾಡಿದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.

ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೊರೋನ ಲಾಕ್ ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೇ ನಾನು ಹೇಳಿದ್ದೇನೆ ಎಂದು ಕುಮಾರಸ್ವಾಮಿ ಸ್ಪಷ್ಟಣೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News