ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2021-10-05 14:18 GMT
ಫೈಲ್ ಚಿತ್ರ

ಬೆಂಗಳೂರು, ಅ.5: ಶಾಹೀನ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅ.6ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ ಹಾಗೂ ಜುಲೈ ತಿಂಗಳಲ್ಲಿ ರಾಜ್ಯದ ಹಲವೆಡೆ ಭಾರೀ ವರ್ಷಧಾರೆಯಾಗಿತ್ತು. ಜುಲೈ ತಿಂಗಳಲ್ಲಿ ಬಿದ್ದ ಮಳೆಯ ವೇಳೆ ನದಿ, ಹಳ್ಳಕೊಳ್ಳ, ಕೆರೆಗಳು ಉಕ್ಕಿ ಹರಿದಿದ್ದವು. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಜನಜೀವನ ಅಸ್ತವ್ಯಸ್ತವಾಗಿತ್ತು. ಆಗಸ್ಟ್ ಮೊದಲ ವಾರದಲ್ಲಿಯೂ ಕರಾವಳಿ, ಮಳೆನಾಡು ಭಾಗಗಳಲ್ಲಿ ಮಳೆಯಾಗಿತ್ತು. ನಂತರ ಅಬ್ಬರ ಕಡಿಮೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News