×
Ad

ಬಾಲ ಕಾರ್ಮಿಕ, ಕಿಶೋರ ಕಾರ್ಮಿಕರ ಸಮೀಕ್ಷೆಗೆ ಅರ್ಜಿ ಆಹ್ವಾನ

Update: 2021-10-05 20:41 IST

ಉಡುಪಿ, ಅ.5: ಉಡುಪಿ ಜಿಲ್ಲಾ ವ್ಯಾಪ್ತಿಯೊಳಗಿರುವ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂಸ್ಥೆಯು ಸಕ್ಷಮ ನೋಂದಾಣಾಧಿಕಾರಿಗಳಲ್ಲಿ ನೋಂದಣಿ ಹೊಂದಿರಬೇಕು ಮತ್ತು ಕನಿಷ್ಟ 3ವರ್ಷಗಳನ್ನು ಪೂರೈಸಿರಬೇಕು. ಕಾಲಕಾಲಕ್ಕೆ ನವೀಕರಿಸಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಈ ಹಿಂದೆ ಇಂತಹ ಯಾವುದಾದರೂ ಸಮೀಕ್ಷೆ ನಡೆಸಿದ ಅನುಭವ ಹೊಂದಿದ್ದು, ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು.

ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿ ಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ದೂ ಸಂ: 0820-2574977 ಅಥವಾ 8553141512ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News