ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಚ್ಚರಿ ಮೂಡಿಸಿದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್

Update: 2021-10-06 13:14 GMT

ಮೈಸೂರು,ಅ.6: ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗವಹಿಸುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಮೈಸೂರು ನಗರದಲ್ಲಿ ನಡೆದಿದೆ.

ನಗರ್ ವಿದ್ಯಾರಣ್ಯಪುರಂನ ಮಹಾಲೀಂಗೇಶ್ವರ ದೇವಸ್ಥಾನದ ಬಳಿಯ ಉದ್ಯಾನವನದಲ್ಲಿ ಬುಧವಾರ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಆಯೋಜಿಸಿದ್ದ “ಮೋದಿ ಯುಗ್” ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಟ್ಟಿಗೆ ವೇದಿಕೆಗೆ ಆಗಮಿಸಿದ ಕೆ.ಆರ್.ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್. ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಅವರನ್ನು ಪಕ್ಕಕ್ಕೆ ಸರಿಸಿ ವೇದಿಕೆಯಲ್ಲಿ ಕುಳಿತುಕೊಂಡು ಕುತೂಹಲ ಮೂಡಿಸಿದರು.

ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಸರಿ ಶಾಲನ್ನು ಹೊದ್ದಿಕೊಂಡು ಬಿಜೆಪಿ ಪಕ್ಷದವರಿಗೂ ಕಡಿಮೆಯಿಲ್ಲದಂತೆ ಎಲ್ಲರೊಂದಿಗೆ ಶಾಸಕ ಸಾ.ರಾ.ಮಹೇಶ್ ಮಾತುಕತೆಯಲ್ಲಿ ತೊಡಗಿದ್ದರು. ಒಟ್ಟಿನಲ್ಲಿ ಬಿಜೆಪಿ ಪಕ್ಷದವರ ಕಾರ್ಯಕ್ರಮದಲ್ಲಿ ಜೆಡಿಎಸ್  ಪಕ್ಷದ ಶಾಸಕ ಭಾಗವಹಿಸಿ  ಬಿಜೆಪಿ ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡಿದ್ದು ಮಾತ್ರ ಚರ್ಚೆಗೆ ಗ್ರಾಸವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News