×
Ad

ಮಹಿಳೆಗೆ ಕಿರುಕುಳ ಆರೋಪ : ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ದೂರು ದಾಖಲು

Update: 2021-10-06 22:54 IST
ಫೈಲ್ ಫೋಟೊ 

ಉಳ್ಳಾಲ, ಅ. 6: ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.

ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್‌ಗೆ ಅರ್ಜಿ ನೀಡಲೆಂದು ಮುನ್ನೂರು ಗ್ರಾಪಂಗೆ ತೆರಳಿದ್ದರು. ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಫ್‌ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಈ ಹಿನ್ನೆಲೆಯಲ್ಲಿ ಮಹಿಳೆ ಉಳ್ಳಾಲ ಠಾಣೆಯಲ್ಲಿ ಕೆಲವು ದಿನಗಳ ಬಳಿಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News