ಪಿ.ಕೆ.ಪಿ. ಅಬ್ದುಸ್ಸಲಾಂ ಮುಸ್ಲಿಯಾರ್ ನಿಧನ
ಮಂಗಳೂರು, ಅ.7: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಉಪಾಧ್ಯಕ್ಷ, ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ಅಧ್ಯಕ್ಷರೂ ಆಗಿದ್ದ ಪಿ.ಕೆ.ಪಿ. ಅಬ್ದುಸ್ಸಲಾಂ ಮುಸ್ಲಿಯಾರ್ (85) ಇಂದು ಕೇರಳದ ಕಣ್ಣೂರಿನಲ್ಲಿ ನಿಧನರಾದರು.
ಪ್ರಮುಖ ವಿದ್ವಾಂಸ ಕುಂಞಿ ಅಹ್ಮದ್ ಹಾಜಿಯವರ ಪುತ್ರನಾಗಿ 1935ರ ಜುಲೈ 1ರಂದು ಪಾಪಿನಶ್ಯೇರಿಯಲ್ಲಿ ಜನಿಸಿದ್ದ ಪಿ.ಕೆ.ಪಿ. ಅಬ್ದುಸ್ಸಲಾಂ ಮುಸ್ಲಿಯಾರ್ 1963ರಲ್ಲಿ ಬಾಖವಿ ಸನದು ಪಡೆದರು. 1965ರಲ್ಲಿ ಸಮಸ್ತ ಕಾರ್ಯಕಾರಿ ಸಮಿತಿ ಸದಸ್ಯರಾಗಿ, 1994ರಲ್ಲಿ ಸಮಸ್ತ ಮುಶಾವರ ಸದಸ್ಯರಾಗಿ, 2009 ರಿಂದ 2013ರವರೆಗೆ ಎಸ್ಕೆಐಎಂವಿಬಿ ಕಾರ್ಯದರ್ಶಿಯಾಗಿ, 2013ರಲ್ಲಿ ಎಸ್ಕೆಐಎಂವಿಬಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಐವರು ಮಕ್ಕಳ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ : ಪಿಕೆಪಿ ಅಬ್ದುಲ್ ಸಲಾಂ ಮುಸ್ಲಿಯಾರ್ ನಿಧನಕ್ಕೆ ದ.ಕ. ಜಿಲ್ಲಾ ಖಾಝಿ, ಸಮಸ್ತ ಮುಶಾವರ ಸದಸ್ಯ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಮಸ್ತ ಮುಶಾವರ ಸದಸ್ಯ ಬಿ.ಕೆ ಅಬ್ದುಲ್ ಖಾದರ್ ಅಲ್ ಖಾಸಿಮಿ, ಜಂಇಯ್ಯತುಲ್ ಉಲಮಾ ದಕ್ಷಿಣ ಕರ್ನಾಟಕ ಅಧ್ಯಕ್ಷ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ , ಕೋಶಾಧಿಕಾರಿ ಝೈನುಲ್ ಅಬಿದೀನ್ ತಂಙಳ್ ಬೆಳ್ತಂಗಡಿ, ಜಂಇಯ್ಯತುಲ್ ಮುದ್ರೀಸಿನ್ ದ.ಕ. ಅಧ್ಯಕ್ಷ ಉಸ್ಮಾನ್ ಫೈಝಿ ತೋಡಾರು, ಮ್ಯಾನೇಜ್ ಮೆಂಟ್ ದ.ಕ. ಜಿಲ್ಲಾ ಅಧ್ಯಕ್ಷ ಐ.ಮೊಯ್ದಿನಬ್ಬ ಹಾಜಿ, ಎಸ್ವೈಎಸ್ ದ.ಕ. ಜಿಲ್ಲಾ ಅಧ್ಯಕ್ಷ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಜಂಇಯ್ಯತುಲ್ ಮುಅಲ್ಲಿಮೀನ್ ಜಿಲ್ಲಾ ಅಧ್ಯಕ್ಷ ಶಂಸುದ್ದೀನ್ ದಾರಿಮಿ, ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಸೈಯದ್ ಅಮೀರ್ ತಂಙಳ್ ಕಿನ್ಯ, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿ ಕಾರ್ಯದರ್ಶಿ ಖಾಸಿಂ ದಾರಿಮಿ, ರಾಜ್ಯ ಅಧ್ಯಕ್ಷ ಅನೀಸ್ ಕೌಸರಿ, ದ.ಕ. ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.