ಬೆಳ್ತಂಗಡಿ : ಕೂಲಿ ಕಾರ್ಮಿಕನ ಕೊಲೆ; ಆರೋಪಿ ಸೆರೆ

Update: 2021-10-08 10:28 GMT

ಬೆಳ್ತಂಗಡಿ: ವೇಣೂರು ಕರಿಮಣೇಲುವಿನಲ್ಲಿ ವ್ಯಕ್ತಿಯೊಬ್ಬರನ್ನು ತಲವಾರಿನಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಕರಿಮಣೇಲು ನಿವಾಸಿ, ಕೂಲಿ ಕಾರ್ಮಿಕ ಸಂಜೀವ ಶೆಟ್ಟಿ (60) ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣದ ಆರೋಪಿ ಸ್ಥಳೀಯ ನಿವಾಸಿ ಶಿವು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ. ಕೊಲೆಯಾದ ವ್ಯಕ್ತಿಯ ಸಂಬಂಧಿಯಾಗಿದ್ದು ರಾತ್ರಿ ವೇಳೆ ಇಬ್ಬರೂ ಸೇರಿ ಮದ್ಯಪಾನ ಮಾಡಿದ್ದು ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಕೊಲೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಜೀವ ಶೆಟ್ಟಿ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈ ಹತ್ಯೆ ನಡೆದಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಸಂಜೀವ ಶೆಟ್ಟಿ ಕೂಲಿ ಕಾರ್ಮಿಕನಾಗಿದ್ದು, ವೈಯುಕ್ತಿಕ ದ್ವೇಷದಿಂದ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News