ಕಡಬ : ಹಾವು ಕಡಿದು ವ್ಯಕ್ತಿ ಮೃತ್ಯು
Update: 2021-10-08 09:47 GMT
ಕಡಬ : ವಿಷಕಾರಿ ಹಾವು ಕಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಇಚಿಲಂಪಾಡಿಯ ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ.
ನಾರಾಯಣ ಶೆಟ್ಟಿ ಅವರು ಗುರುವಾರ ಗದ್ದೆಯ ಬದಿಯಲ್ಲಿ ಹಾದುಹೋಗುತ್ತಿದ್ದ ವೇಳೆ ವಿಷಕಾರಿ ಹಾವು ಕಡಿದಿದ್ದು, ತಕ್ಷಣವೇ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇಂದು ಗಾಯ ಉಲ್ಬಣಿಸಿ ರಕ್ತ ಸ್ರಾವವಾದ ಹಿನ್ನೆಲೆಯಲ್ಲಿ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.