ಶನಿವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತ

Update: 2021-10-08 13:32 GMT

ಬೆಂಗಳೂರು, ಅ.8: ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಅ.9ರಂದು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ.9 ಸಂಜೆ 4ರಿಂದ ಅ.10 ಬೆಳಗ್ಗೆ 6ರವರೆಗೆ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆ ಹೊರಡಿಸಿದೆ.

ಈ ಅವಧಿಯಲ್ಲಿ ಎಂ.ಜಿ.ರಸ್ತೆ ಮತ್ತು ಕೆಂಗೇರಿ ನಡುವೆ ಎಂದಿನಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿದ್ದು, ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡ ಬಳಿಕ ಬೈಯ್ಯಪ್ಪನಹಳ್ಳಿಯವರೆಗೆ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News