ಗಂಗೊಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ನಿಂದನೆ; ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಗೆ ದೂರು

Update: 2021-10-08 17:25 GMT

ಬೆಳ್ತಂಗಡಿ : ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್ (ಸ. ಅ) ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿ ಕೋಮು ಗಲಭೆಗೆ ಪ್ರಚೋದಿಸಿದ್ದು ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಈ ಸಂದರ್ಭ ನೂರುಲ್ ಹುದಾ ಜುಮಾ ಮಸೀದಿ ಮದ್ದಡ್ಕ ಅಧ್ಯಕ್ಷರಾದ ಎಚ್ ಎಂ ಹಸನಬ್ಬ, ಪ್ರಧಾನ ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕೋಶಾಧಿಕಾರಿ ಎಂ ರಿಯಾಝ್ ಸಬರಬೈಲ್ ಮತ್ತು ಉಪಾಧ್ಯಕ್ಷರು ಮುಹಮ್ಮದ್ ಸಾಲಿ ಮದ್ದಡ್ಕ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News