ಲಖಿಂಪುರ್ ಖೇರಿ ಹಿಂಸಾಚಾರ: ವಿಚಾರಣೆಗೆ ಹಾಜರಾದ ಕೇಂದ್ರ ಸಚಿವನ ಪುತ್ರ
Update: 2021-10-09 05:51 GMT
ಲಕ್ನೋ: ಇಲ್ಲಿನ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹಾಯಿಸಿದ ಘಟನೆಯಿಂದ ಹಿಂಸಾಚಾರ ಉಂಟಾಗಿತ್ತು. ಇದರಲ್ಲಿ ಪ್ರಮುಖವಾಗಿ ಕೇಂದ್ರ ಸಹಾಯಕ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾರ ಪುತ್ರ ಆಶಿಶ್ ಮಿಶ್ರಾ ಹೆಸರು ಕೇಳಿ ಬಂದಿತ್ತು. ಮೊದಲ ಪೊಲೀಸ್ ಸಮನ್ಸ್ ಗೆ ಹಾಜರಾಗದೇ ಇದ್ದ ಆಶಿಶ್ ಇದೀಗ ಎರಡನೇ ಬಾರಿಯ ಸಮನ್ಸ್ ಬಳಿಕ ವಿಚಾರಣೆಗೆ ಹಾಜರಾಗಿದ್ದಾನೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಕೇಂದ್ರ ಸಚಿವರ ಪುತ್ರನನ್ನು ಬಂಧಿಸುವಂತೆ ಪ್ರತಿಪಕ್ಷಗಳ ಬೇಡಿಕೆಗಳ ನಡುವೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ಯಾರೊಂದಿಗೂ ಅನ್ಯಾಯವಾಗುವುದಿಲ್ಲ ಮತ್ತು ಯಾವುದೇ ರೀತಿಯ ಒತ್ತಡ ಅಥವಾ ಸಾಕ್ಷ್ಯವಿಲ್ಲದೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ" ಎಂದು ಹೇಳಿದ್ದಾರೆ.