''ಪಕ್ಷ ಕಟ್ಟಿದವರನ್ನು ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್'': ಕಾಂಗ್ರೆಸ್ ಟೀಕೆ

Update: 2021-10-10 12:21 GMT

ಬೆಂಗಳರು: 'ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್' ಎಂದು ಟೀಕಿಸಿರುವ ಕಾಂಗ್ರೆಸ್ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.  

ಕಾಂಗ್ರೆಸ್ ನ ಸರಣಿ ಟ್ವೀಟ್ ಹೀಗಿದೆ

'ಬಿಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಕಾಡಿತ್ತು, ಅಧಿಕಾರ ಕಳೆದುಕೊಂಡ ಮೇಲೂ ಕಾಡುತ್ತಿದೆ. ಮುಂದಿನ ಚುನಾವಣೆಯೊಳಗೆ ಬಿಎಸ್ ವೈ ಅವರನ್ನ ಸಂಪೂರ್ಣ ಮುಗಿಸುವ "ಟಾರ್ಗೆಟ್ ಬಿಎಸ್ ವೈ" ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ. ಪಕ್ಷ ಕಟ್ಟಿದವರನ್ನ ಮುಗಿಸುವುದು ಬಿಜೆಪಿಯ ಹೊಸ ಟ್ರೆಂಡ್!' ಎಂದು ಟೀಕಿಸಿದೆ.

''ನೀರಾವರಿ ಇಲಾಖೆಯ 20,000 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಿವೈ ವಿಜಯೇಂದ್ರ ಹಾಗೂ ಬಿಎಸ್ ವೈ ಅವರ ಆಪ್ತರನ್ನೇ ಗುರಿಯಾಗಿಸಿ ಐಟಿ ದಾಳಿಯಾಗಿದೆ. ಸರ್ಕಾರದ ಭ್ರಷ್ಟಾಚಾರವನ್ನ, ವಿಜಯೇಂದ್ರ ಹಸ್ತಕ್ಷೇಪವನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ, ಅಥವಾ ಬಿಎಸ್ ವೈ ಅವರನ್ನು ಮುಗಿಸುವ ತಂತ್ರವೆನ್ನುತ್ತದೆಯೇ. ರಾಜ್ಯ ಬಿಜೆಪಿ ಉತ್ತರಿಸಬೇಕು'' ಎಂದು ಕಾಂಗ್ರೆಸ್ ಪ್ರಶ್ನಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News