ಚಿಕ್ಕಮಗಳೂರು: ಲಾಕಪ್ ಚಿಲಕ ತೆಗೆದು ಅತ್ಯಾಚಾರ ಆರೋಪಿ ಪರಾರಿ !
Update: 2021-10-11 06:43 GMT
ಚಿಕ್ಕಮಗಳೂರು : ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿಯೋರ್ವ ಪೊಲೀಸ್ ಠಾಣೆಯ ಲಾಕಪ್ ಚಿಲಕವನ್ನೇ ತೆಗೆದು ಪರಾರಿಯಾದ ಘಟನೆ ರವಿವಾರ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ನಗರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪರಾರಿಯಾದ ಆರೋಪಿಯನ್ನು ನಿಝಾಂ (26) ಎಂದು ಗುರುತಿಸಲಾಗಿದ್ದು, ಸಿಬ್ಬಂದಿ ಇಲ್ಲದ ಸಮಯ ನೋಡಿ ಲಾಕಪ್ ನಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಕೊಪ್ಪ ಪಟ್ಟಣದಲ್ಲಿ ಬಾಳೆಹೊನ್ನುರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.