ದೇರಳಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

Update: 2021-10-11 14:56 GMT

ದೇರಳಕಟ್ಟೆ: ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ  ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರವಿವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ರಕ್ತವು ಯಾವುದೇ ಜಾತಿ ಧರ್ಮಗಳ ಬೇಧವಿಲ್ಲದೆ ಜನರನ್ನು ರಕ್ಷಿಸುತ್ತದೆ. ಎಲ್ಲರ ಧರ್ಮದವರ ರಕ್ತವೂ ಒಂದೇ ಬಣ್ಣದಲ್ಲಿ ಇದೆ. ಹಾಗಾಗಿ ರಕ್ತದಾನವು ಒಂದು ಜೀವವನ್ನೇ ಉಳಿಸುವ ಕಾರ್ಯಕ್ರಮ ವಾಗಿದ್ದು, ಇದನ್ನು ಯುವಜನತೆ ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು.

ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಡಾ. ಅಬ್ದುಲ್ ಶಕೀಲ್ ಮಾತನಾಡಿ, ಕೊರೋನ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸಾಮಾಜಿಕ ಸೇವೆಯನ್ನು ಮಾಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೂ ನೆರವಾಗಿದೆ. ಮುಂದೆಯೂ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುದು ಎಂದರು. ದಿ ಮೈಸೂರ್ ಇಲ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು‌ ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ರಾಜ್ಯಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಬೆಳ್ಮ ಗ್ರಾ.ಪಂ ಅಧ್ಯಕ್ಷ ಬಿ.ಎಂ ಸತ್ತಾರ್, ಹರೇಕಳ ಗ್ರಾ.ಪಂ ಅಧ್ಯಕ್ಷ ಬದ್ರುದ್ದೀನ್,‌ ಬೆಳ್ಮ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ನವೀನ್ ಹೆಗ್ಡೆ, ಕೊಣಾಜೆ ಪೊಲೀಸ್ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ, ಎಸ್ಡಿಪಿಐ ಮುಖಂಡರಾದ ಅತ್ತಾವುಲ್ಲಾ ಜೋಕಟ್ಟೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಇಂಟೆಕ್ ನ ಪುನೀತ್ ಶೆಟ್ಟಿ, ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜಾ, ದೇರಳಕಟ್ಟೆ ಬದ್ರಿಯ ಜುಮಾ‌ ಮಸೀದಿ ಅಧ್ಯಕ್ಷ ಅಬೂಬಕರ್ ನಾಟೆಕಲ್,  ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯನಿರ್ವಾಹಕರಾದ ಫಯಾಝ್ ಮಾಡೂರು, ಫಾರೂಕ್ ಜ್ಯೂಸ್ ರೊಮ್ಯಾಂಟಿಕ್, ಶಾಹುಲ್ ಕಾಶಿಪಟ್ನ, ರಝಾಕ್ ಸಾಲ್ಮಾರ, ಫರ್ಝಾನ್ ಸಿದ್ದಕಟ್ಟೆ,  ನೌಫಲ್ ಬಜ್ಪೆ,ಹಮೀದ್ ಪಜೀರ್, ಫಯಾಝ್ ಮೊಂಟೆಪದವು, ಸಿರಾಜ್ ಪಜೀರ್, ಮನ್ಸೂರ್ ಕೊಡಿಜಾಲ್, ಆರಿಫ್ ಮೊಂಟೆಪದವು, ಫಯಾಝ್ ಮೊಂಟೆಪದವು ಹಾಗೂ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಇದರ ಸದಸ್ಯರು ಉಪಸ್ಥಿತರಿದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಸುಮಾರು 163 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭ ರಾಷ್ಟೀಯ ಮಟ್ಟದ ಬಾಡಿಬಿಲ್ಡ್ ಪ್ರದರ್ಶನ ನಡೆಯಿತು.

ರಕ್ತದಾನಿಗಳಿಗೆ ವಿಶೇಷ ಲಕ್ಕೀ ಡ್ರಾ ಕೂಪನ್ ವ್ಯವಸ್ಥೆ ಮಾಡಲಾಗಿದ್ದು, ಚೊಂಬುಗುಡ್ಡೆ ನಿವಾಸಿ ಇಮ್ತಿಯಾಝ್ ಸ್ಮಾರ್ಟ್ ಫೋನ್ ಬಹುಮಾನ ವಿಜೇತರಾದರು. ಟ್ರಸ್ಟಿನ ಸಂಚಾಲಕ ನೌಫಲ್.ಬಿ ಸ್ವಾಗತಿಸಿದರು. ಟ್ರಸ್ಟಿ ಇಕ್ಬಾಲ್ ಎಚ್.ಆರ್ ವಂದಿಸಿದರು. ಯುವ ನ್ಯಾಯವಾದಿ ಗಝಾಲಿ ಕೆ.ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News