ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ಥಿ ಪ್ರಮಾಣ ವಚನ ಸ್ವೀಕಾರ

Update: 2021-10-11 15:41 GMT

ಬೆಂಗಳೂರು, ಅ.11: ಕರ್ನಾಟಕ ಹೈಕೋರ್ಟ್‍ನ  ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ಥಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. 

ಸಮಾರಂಭದಲ್ಲಿ ಮುಖ್ಯಮಂತಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ಗೋವಿಂದ ಎಂ ಕಾರಜೋಳ, ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News