ಕೋರ್ಟ್ ಸೂಚನೆಯಂತೆ ವಂಚನೆ ಆರೋಪದಡಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್‍ಐಆರ್

Update: 2021-10-12 12:33 GMT

ಬೆಂಗಳೂರು, ಅ.12: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. 

ಹಿರಿಯ ನಾಗರಿಕರಿಗೆ 2 ಕೋಟಿ 84 ಲಕ್ಷ ವಂಚನೆ ಎಸಗಿದ ಆರೋಪವನ್ನು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಮಾಡಲಾಗಿದ್ದು, ಇಂಡ್‍ಸಿಂಡ್ ಕಂಪೆನಿಯ ನಿರ್ದೇಶಕ ಕೃಷ್ಣ ಎಂಬುವವರು ಈ ದೂರು ನೀಡಿದ್ದಾರೆ.

ಈ ಮುನ್ನ ಇದೇ ದೂರಿಗೆ ಸಂಬಂಧಿಸಿ ಮಾಜಿ ಸಚಿವ ಕಟ್ಟಾ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು. ಕೊನೆಗೆ ಇಂಡ್‍ಸಿಂಡ್ ಕಂಪೆನಿ ನಿರ್ದೇಶಕ ಕೃಷ್ಣ ಅವರು 4ನೆ ಎಸಿಎಂಎಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಸೂಚನೆಯಂತೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News