ಕರಾವಳಿಯಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

Update: 2021-10-12 14:40 GMT

ಉಡುಪಿ, ಅ.12: ಉಡುಪಿ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ಅ.12ರಿಂದ ಪ್ರಾರಂಭಿಸಿ 17ರವರೆಗೆ ಕರಾವಳಿಯ ಮೂರು ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆ ಸುರಿಯಲಿದೆ. ಜಿಲ್ಲೆಗಳಲ್ಲಿ 64.5ಮಿ.ಮೀ.ಗೂ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಅಲ್ಲಲ್ಲಿ ಗುಡುಗು ಹಾಗೂ ಸಿಡಿಲಿನೊಂದಿಗೆ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 23.7ಮಿ.ಮೀ. ಮಳೆಯಾಗಿದೆ. ಕಾಪುವಿನಲ್ಲಿ ಅತ್ಯಧಿಕ 23.8ಮಿ.ಮೀ., ಕುಂದಾಪುರದಲ್ಲಿ 28, ಬೈಂದೂರಿನಲ್ಲಿ 27.9, ಬ್ರಹ್ಮಾವರದಲ್ಲಿ 27, ಉಡುಪಿ 21.8, ಹೆಬ್ರಿ 18.4 ಹಾಗೂ ಕಾರ್ಕಳದಲ್ಲಿ 13.1ಮಿ.ಮೀ. ಮಳೆಯಾಗಿದೆ.

ಕಾರ್ಕಳದ ಕಸಬಾ ಗ್ರಾಮದಲ್ಲಿ ಉದಯ ಎಂಬವರ ಮನೆ ಗಾಳಿ-ಮಳೆಗೆ ಭಾಗಶ: ಹಾನಿಗೊಂಡಿದ್ದು 20 ಸಾವಿರ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ವರದಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News