ಇಂಧನ ಸಚಿವರ ಉಡುಪಿ ಜಿಲ್ಲಾ ಪ್ರವಾಸ

Update: 2021-10-12 14:09 GMT

ಉಡುಪಿ, ಅ.12: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್ ಅವರು ಅ.13ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಅದಮಾರುನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ, ಅಪರಾಹ್ನ 12:30ಕ್ಕೆ ಕಾಪು ಮಾರಿಗುಡಿಗೆ ಭೇಟಿ, 1 ಕ್ಕೆ ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನ್ಯೂಸಾಯನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಹಾಗೂ ಕಂಪ್ಯೂಟರ್ ಸಾಯನ್ಸ್ ಪ್ರಯೋಗಾಲಯ ಉದ್ಘಾಟನೆ, 2:30ಕ್ಕೆ ಕುಂತಲನಗರದಲ್ಲಿ ಮತ್ತು ಮೂಡುಬೆಳ್ಳೆಯಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News