ಮಳೆಯಿಂದ ತೋಡಿಗೆ ಬಿದ್ದು ಮೃತ್ಯು

Update: 2021-10-13 16:48 GMT

ಕಾರ್ಕಳ, ಅ.13: ಮಳೆಯಿಂದಾಗಿ ವ್ಯಕ್ತಿಯೊಬ್ಬರು ನಿಂಜೂರು ಕೊಡಮಣಿ ತ್ತಾಯ ದೈವಸ್ಥಾನದ ದ್ವಾರದ ಬಳಿಯ ತೋಡಿಗೆ ಬಿದ್ದು ಮೃತಪಟ್ಟಿರುವ ಬಗ್ಗೆ ವರದಿ ಯಾಗಿದೆ.

ಮೃತರನ್ನು ನಿಂಜೂರು ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸಂಜೀವ ಹಾಂಡ(59) ಎಂದು ಗುರುತಿಸಲಾಗಿದೆ. ತಾತ್ಕಾಲಿಕ ನೆಲೆಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡಿಕೊಂಡಿದ್ದ ಇವರು, ಅ.12ರಂದು ಕೆಲಸಕ್ಕೆ ಹೋಗಿದ್ದು, ಸಂಜೆಯಾದರೂ ಮನೆಗೆ ವಾಪಾಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದರು.

ಹುಡುಕಾಡಿದಾಗ ಇವರ ಮೃತದೇಹವು ಅ.13ರಂದು ಬೆಳಿಗ್ಗೆ ತೋಡಿನಲ್ಲಿ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರು ನೀರಿನ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಉಸಿರುಗಟ್ಟಿ ಮೃತಪಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News