ಮಂಡ್ಯ; ಅಂಗಡಿ ಎದುರು ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಮೃತ್ಯು

Update: 2021-10-14 13:15 GMT

ಮಂಡ್ಯ, ಅ.14: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದು ಇಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಮರಳಿಗ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಕೀಳಘಟ್ಟ ಗ್ರಾಮದ ಗಿರಿಶೆಟ್ಟಿ(65) ಹಾಗು ಎನ್.ಕೋಡಿಹಳ್ಳಿ ಗ್ರಾಮದ ಗ್ರಾಪಂ ಮಾಜಿ ಸದಸ್ಯ ಲೋಕೇಶ್ (45) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳು.

ಕೊಪ್ಪ ಎನ್. ಎಸ್‌. ಎಲ್. ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿ ಬೆಸಗರಹಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆಬದಿಯ ಕೋಳಿ ಅಂಗಡಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಿಂದ ಅಂಗಡಿ ಮತ್ತು ಅಂಗಡಿ ಮುಂದೆ ನಿಂತಿದ್ದ ಎರಡು ಬೈಕ್ ಜಖಂಗೊಂಡಿವೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News