ಶಿವಮೊಗ್ಗ : ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

Update: 2021-10-15 06:31 GMT

ಶಿವಮೊಗ್ಗ : ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಗುರುವಾರ‌ ತಡರಾತ್ರಿ ನಡೆದಿದೆ.

ಮೃತರನ್ನು ಸಂತೋಷ್ (30) ಎಂದು ಗುರುತಿಸಲಾಗಿದೆ. ಈತ ಗಾಡಿಕೊಪ್ಪ ಬಳಿಯ ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಬಾಪೂಜಿನಗರದ ಗಂಗಾಮತ ಹಾಸ್ಟೆಲ್ ಸಮೀಪ ಸಂತೋಷ್ ನನ್ನು ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News