ರಾಜ್ಯದಲ್ಲಿ ಶುಕ್ರವಾರ 470 ಮಂದಿಗೆ ಕೊರೋನ ದೃಢ : 9 ಮಂದಿ ಸಾವು

Update: 2021-10-15 15:02 GMT

ಬೆಂಗಳೂರು, ಅ. 15: ರಾಜ್ಯದಲ್ಲಿ ಶುಕ್ರವಾರ 470 ಹೊಸ ಕೊರಣ ಪ್ರಕರಣಗಳು ದೃಢವಾಗಿವೆ. 9 ಜನರು ಸೋಂಕಿಗೆ ಬಲಿಯಾಗಿದ್ದು, 368 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,82,869ಕ್ಕೆ ತಲುಪಿದೆ. ಇಲ್ಲಿಯವರೆಗೂ ಒಟ್ಟು ಸಾವಿನ ಸಂಖ್ಯೆ 37931ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಪ್ರಕರಣ ಸಂಖ್ಯೆ 9,671ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ ಕೊರೋನಾ ಕೇರ್ ಸೆಂಟರ್‍ಗಳಲ್ಲಿ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. 

9 ಸೋಂಕಿತರು ಬಲಿ: ಬೆಂಗಳೂರು ನಗರ 1, ಚಾಮರಾಜನಗರ 1, ದಕ್ಷಿಣ ಕನ್ನಡ 1, ದಾವಣಗೆರೆ 1, ಮೈಸೂರು 2, ರಾಮನಗರ 2, ಉಡುಪಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 470 ಪ್ರಕರಣಗಳು ದೃಡವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 232, ಬೀದರ್ 1, ಚಾಮರಾಜನಗರ 2, ಚಿಕ್ಕಮಗಳೂರು 8, ಚಿತ್ರದುರ್ಗ 3, ದಕ್ಷಿಣಕನ್ನಡ 36, ದಾವಣಗೆರೆ 1, ಧಾರವಾಡ 2, ಹಾಸನ 16, ಕೊಡಗು 22, ಕೋಲಾರ 9, ಮಂಡ್ಯ 16, ಮೈಸೂರು 59, ರಾಮನಗರ 4, ಶಿವಮೊಗ್ಗ 4, ತುಮಕೂರು 16, ಉಡುಪಿ 14, ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ. 

ಬೆಂಗಳೂರಿನಲ್ಲಿ ಶುಕ್ರವಾರ 232 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,49,124 ಕೊರೋನಾ ಸೋಂಕಿತರು ದೃಢಪಟ್ಟಿದ್ದು, 16206 ಜನರು ಬಲಿಯಾಗಿದ್ದಾರೆ. ಒಟ್ಟು 12,26,171 ಜನರು ಗುಣಮುಖರಾಗಿ ಬಿಡುಗಡೆರಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News