ಉನ್ನತ ಶಿಕ್ಷಣ ಸಚಿವರಿಗೆ ದುಬೈ ಕನ್ನಡಿಗರಿಂದ ಸನ್ಮಾನ

Update: 2021-10-16 05:17 GMT

ದುಬೈ: `ದುಬೈ ಎಕ್ಸ್ ಪೋ-2020’ರಲ್ಲಿ ಕರ್ನಾಟಕ ಸರಕಾರದ ಪರವಾಗಿ ಭಾಗವಹಿಸಲು ಇಲ್ಲಿಗೆ ಆಗಮಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಇಲ್ಲಿರುವ ಸಂಯುಕ್ತ ಅರಬ್ ಸಂಸ್ಥಾನದ ಅನಿವಾಸಿ ಕನ್ನಡಿಗರ ವೇದಿಕೆಯ ವತಿಯಿಂದ ಶುಕ್ರವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ``ಅನಿವಾಸಿ ಕನ್ನಡಿಗರು ನೀಡಿದ ಈ ಸನ್ಮಾನದಿಂದ ಹೃದಯ ತುಂಬಿ ಬಂದಿದೆ. ಇಲ್ಲಿರುವ ಕನ್ನಡಿಗರೆಲ್ಲರೂ ಕರ್ನಾಟಕದ ರಾಯಭಾರಿಗಳಿದ್ದಂತೆ,’’ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯರ ಸಂಘದ ಪದಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News