ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮ: ಸಿಎಂ ಬೊಮ್ಮಾಯಿ

Update: 2021-10-16 08:13 GMT

ಮೈಸೂರು, ಅ.16: ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗವಾದರೆ ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ  ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ  ಎಂಬ ಬಗ್ಗೆ ಪತ್ರಕರ್ತರೊಬ್ಬರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ- ಶ್ರಮ ಎಂಬ ಪೋರ್ಟಲ್ ಪ್ರಾರಂಭಿಸಿ ಆಧಾರ್ ಕಾರ್ಡ್ ಅನ್ನು ಲಿಂಕ್ ಕಲ್ಪಿಸಲಾಗಿದೆ. ದುರುಪಯೋಗವಾಗಿರುವ ಪ್ರಕರಣಗಳಿದ್ದಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.  

ಗಡಿ ಭಾಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಶೇ 1ಕ್ಕಿಂತ ಕಡಿಮೆಯಾಗುತ್ತಿದೆ. ಶೀಘ್ರವಾಗಿ ತಜ್ಞರ ಸಭೆ ನಡೆಯಲಿದ್ದು, ಶಾಲೆಗಳ ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News