ತಜ್ಞರ ಜೊತೆ ಚರ್ಚೆ ನಡೆಸಿ ಶೀಘ್ರದಲ್ಲೇ ಕೋವಿಡ್‌ ನಿಯಮ ಸರಳೀಕರಣಕ್ಕೆ ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-10-16 10:47 GMT

ದಾವಣಗೆರೆ: ಕೋವಿಡ್‌ ನಿಯಂತ್ರಣದಲ್ಲಿ ಇರುವುದರಿಂದ ಕೋವಿಡ್‌ ನಿಯಮಗಳನ್ನು ಶೀಘ್ರದಲ್ಲಿ ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೊನ್ನಾಳಿ ತಾಲ್ಲೂಕು ಎಚ್‌ . ಕಡದಕಟ್ಟೆಯ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದ ಅವರು, ಎರಡು ದಿನಗಳಲ್ಲಿ ತಜ್ಞರ ಜೊತೆ ಚರ್ಚೆ ನಡೆಸಲಾಗುವುದು. ಗಡಿ ಜಿಲ್ಲೆಗಳಲ್ಲಿ ಕೂಡ ಕೊರೊನ ಪ್ರಮಾಣ ಕಡಿಮೆಯಾಗಿದೆ. ಶಾಲೆ ಸೇರಿದಂತೆ ವಿವಿಧ ವಿಚಾರಗಳ  ಬಗ್ಗೆ ಚಿಂತನೆ ಮಾಡಿ ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ವಿಕ್ಟೋರಿ ಆಸ್ಪತ್ರೆ ಯಲ್ಲಿ ಬೆಡ್ ಸಮಸ್ಯೆ ವಿಚಾರದ ಬಗ್ಗೆ ಸಂಬಂಧಿಸಿದವರ ಜೊತೆ ಮಾತಾಡಿದ್ದೇನೆ. ಎಲ್ಲವೂ ಸರಿಯಾಗಲಿದೆ ಎಂದು ತಿಳಿಸಿದರು. 

ಬಿ.ಎಸ್‌. ಯಡಿಯೂರಪ್ಪ ಅವರು ಸಿಂದಗಿ ಮತ್ತು ಹಾನಗಲ್‌ ಉಪ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೆ ದಿನಾಂಕ ಕೂಡ ನಿಗದಿಯಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News