ಅ.17ರಂದು ಮಲ್ಪೆ ಬೀಚ್ನಲ್ಲಿ ಸ್ವಚ್ಛತಾ ಕಾರ್ಯಕ್ರಮ
Update: 2021-10-16 13:51 GMT
ಉಡುಪಿ, ಅ.16: ಅಝಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲಾಡಳಿತ, ಜಿಪಂ, ರಾಷ್ಟ್ರೀಯ ಸೇವಾ ಯೋಜನೆ, ಎನ್ಸಿಸಿ, ಭಾರತ್ ಸ್ಕೌಟ್ಸ್ ಗೈಡ್ಸ್, ಯುವಕ ಮಂಡಲಗಳು, ಲಯನ್ಸ್ ಕ್ಲಬ್, ಜೆಸಿಐ ಹಾಗೂ ಸ್ವಚ್ಛ ಭಾರತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಅ.17ರಂದು ಬೆಳಗ್ಗೆ 9 ಗಂಟೆಗೆ ಮಲ್ಪೆ ಬೀಚ್ನಲ್ಲಿ ಹಮ್ಮಿಕೊಂಡಿದೆ.
ಕಾರ್ಯಕ್ರಮಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಚಾಲನೆ ನೀಡಲಿದ್ದು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅಪರ ಜಿಲ್ಲಾಧಿ ಕಾರಿ, ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.