ರಂಗ ತರಬೇತಿ ಕಾರ್ಯಾಗಾರ ಸರಣಿ ಉದ್ಘಾಟನೆ

Update: 2021-10-16 13:55 GMT

ಉಡುಪಿ, ಅ.16: ಉಡುಪಿ ರಂಗಭೂಮಿ ವತಿಯಿಂದ ರಾಜ್ಯದ ಹೆಸರಾಂತ ರಂಗಕರ್ಮಿಗಳ ಸಹಕಾರದೊಂದಿಗೆ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ವಿವಿಧ ರಂಗ ತರಬೇತಿ ಕಾರ್ಯಾಗಾರ ಸರಣಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಂಗಕರ್ಮಿ ಹಾಗೂ ಚಲನಚಿತ್ರ ನಟ ಮಂಡ್ಯ ರಮೇಶ್, ಸುರತ್ಕಲ್ ಸೂರಜ್ ಇಂಟರ್ ನ್ಯಾಷನಲ್ ಹೋಟೆಲ್ನ ರವೀಂದ್ರ ಪೂಜಾರಿ, ಎಂಜಿಎಂ ಕಾಲೇಜು ಪ್ರಾಂಶುಪಾಲ ದೇವಿದಾಸ್ ಎಸ್.ನಾಯ್ಕ್, ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉಪಾಧ್ಯಕ್ಷರಾದ ನಂದಕುಮಾರ್ ಎಂ., ಭಾಸ್ಕರ್ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

ರಂಗಭೂಮಿ ಕ್ಷೇತ್ರಕ್ಕೆ ಹೊಸ ನೀರು ಹರಿದು ಬರಬೇಕೆಂಬ ಮಹತ್ತರ ಸಂಕಲ್ಪದೊಂದಿಗೆ ಉಡುಪಿಯಲ್ಲಿ ಪ್ರತಿ ತಿಂಗಳ 2ನೇ ಅಥವಾ 3ನೇ ವಾರಂತ್ಯ ದಲ್ಲಿ ರಾಜ್ಯದ ಹೆಸರಾಂತ ರಂಗಕರ್ಮಿಗಳ ಸಹಕಾರದೊಂದಿಗೆ ಈ ರಂಗ ತರಬೇತಿ ಕಾರ್ಯಾಗಾರ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News