ವಿಷದ ಹಾವು ಕಚ್ಚಿ ಮಹಿಳೆ ಮೃತ್ಯು

Update: 2021-10-16 16:06 GMT

ಶಂಕರನಾರಾಯಣ, ಅ.16: ಹಲ್ಲು ಕೊಯ್ಯುತ್ತಿರುವಾಗ ಹಾವು ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹಳ್ಳಿಹೊಳೆ ಗ್ರಾಮದ ಹನ್ಕಿ ಎಂಬಲ್ಲಿ ನಡೆದಿದೆ.

ಮೃತರನ್ನು ಹನ್ಕಿ ನಿವಾಸಿ ಶಂಕರ ಎಂಬವರ ಪತ್ನಿ ಲಕ್ಷ್ಮೀ(64) ಎಂದು ಗುರು ತಿಸಲಾಗಿದೆ. ಇವರು ಅ.13ರಂದು ಮನೆ ಸಮೀಪದ ತೋಟದಲ್ಲಿ ಹುಲ್ಲು ಕೊಯ್ಯುತ್ತಿರುವಾಗ ಕೈ ಬೆರಳಿಗೆ ವಿಷಪೂರಿತ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು ಅ.15ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಂಕರನಾರಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News