ಎಸ್‌ಡಿಪಿಐ ಉಡುಪಿ ಜಿಲ್ಲಾ ನಾಯಕರಿಗೆ ಸನ್ಮಾನ

Update: 2021-10-16 16:32 GMT

ಉಡುಪಿ, ಅ.16: ಎಸ್‌ಡಿಪಿಐ ಪಡುತೋನ್ಸೆ ಗ್ರಾಪಂ ಸಮಿತಿಯಿಂದ ನೂತನ ಜಿಲ್ಲಾ ನಾಯಕರಿಗೆ ಸನ್ಮಾನ ಸಮಾರಂಭವನ್ನು ಇತ್ತೀಚೆಗೆ ಹೂಡೆಯ ಎಸ್.ಡಿ.ಪಿ.ಐ. ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ. ಉಡುಪಿ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶಾಹಿದ್ ಅಲಿ, ಉಮಾನಾಥ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಖಲೀಲ್ ಉಡುಪಿ, ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಾಧಿಕ್ ಮಲ್ಪೆ ಉಪಸ್ಥಿತರಿದ್ದರು.

ಎಸ್.ಡಿ.ಪಿ.ಐ. ಪಡುತೋನ್ಸೆ ಗ್ರಾಪಂ ಸಮಿತಿಯ ಅಧ್ಯಕ್ಷ ಅಲ್ತಾಫ್ ಕೆಮ್ಮಣ್ಣು ಸ್ವಾಗತಿಸಿದರು. ಗ್ರಾಪಂ ಸದಸ್ಯ ಹೈದರ್ ಆಲಿ ವಂದಿಸಿದರು. ಜಿ.ಇಮ್ತಿಯಾಝ್  ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News