ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು ಜೆಡಿಎಸ್: ಹೆಚ್.ಡಿ. ರೇವಣ್ಣ

Update: 2021-10-16 18:14 GMT

ಹಾಸನ :  ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಎಂದು  ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.         

ತಾಲೂಕಿನ ಹೆಚ್. ಆಲದಹಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸ್ಥಾನವನ್ನು ಅಲ್ಪಸಂಖ್ಯಾತರಿಗೆ, ದಲಿತರಿಗೆ ಹಂಚಿಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಅದು ಕಾಂಗ್ರೆಸ್ ನ ಆಂತರಿಕ ವಿಷಯವಾಗಿದ್ದು,  ನಾನು ಈ ಬಗ್ಗೆ ಉತ್ತರಿಸಲು ಹೋಗುವುದಿಲ್ಲ. ಕೋಮುವಾದಿಗಳನ್ನ‌ ದೂರ ಇಡಬೇಕೆಂಬುದು ನಮ್ಮ‌ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಹೇಳುತ್ತಿದ್ದು, ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದರೆ ಎಂದರೆ ಅದು ದೇವೇಗೌಡರು ಮಾತ್ರ ಎಂದು ಉತ್ತರಿಸಿದರು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅವರು ಪ್ರಣಾಳಿಕೆಲಿ‌ ಬಿಡುಗಡೆ ಮಾಡಲಿ. ನಾವೇನು ಬೇಡ ಅಂಥ ಹೇಳಿದ್ದೇವಾ, ಜನರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News