ಸಾರಿಗೆ ಇಲಾಖೆಯಲ್ಲಿ ಉದ್ಯೋಗದ ಆಮಿಷ: ಇಬ್ಬರ ಬಂಧನ

Update: 2021-10-17 11:47 GMT

ಬೆಂಗಳೂರು, ಅ.17: ಕೆಎಸ್ಸಾರ್ಟಿಸಿ ನಿಗಮದಲ್ಲಿ ಉದ್ಯೋಗ ಆಮಿಷವೊಡ್ಡಿ ಹಣ ವಸೂಲಿ ಮಾಡಿರುವ ಆರೋಪ ಸಂಬಂಧ ಇಬ್ಬರನ್ನು ಇಲ್ಲಿನ ಮಾಗಡಿ ರಸ್ತೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ನಿವಾಸಿಗಳಾದ ಮಂಜುನಾಥ್, ಅನಿಲ್ ಎಂಬುವರು ಬಂಧಿತರು ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳ ಪೈಕಿ ಮಂಜುನಾಥ್, ಈ ಹಿಂದೆ ಕೆಎಸ್ಸಾರ್ಟಿಸಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಶಿಸ್ತು ಹಾಗೂ ಉತ್ತಮ ನಡವಳಿಕೆ ತೋರದ ಹಿನ್ನೆಲೆ ಆಡಳಿತ ಮಂಡಳಿ ಇವರನ್ನು ಅಮಾನತು ಮಾಡಿತ್ತು. ಆನಂತರ ಈತ ಹಲವು ಯುವಕರಿಗೆ ಉದ್ಯೋಗದ ಆಮಿಷವೊಡ್ಡಿ ಹಣ ಮಸೂಲಿ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News