ಸಹೋದರಿಯೊಂದಿಗೆ ಸಂಬಂಧ ಬೆಳೆಸಲು ಯತ್ನಿಸಿದ ವ್ಯಕ್ತಿಯ ಕೊಲೆ !

Update: 2021-10-17 16:33 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.17: ಸಹೋದರಿಯೊಂದಿಗೆ ಸಂಬಂಧ ಬೆಳೆಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ಯುವಕವೊರ್ವನನ್ನು ಕೊಲೆಗೈದು ಠಾಣೆಗೆ ಶರಣಾಗಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಭಾಸ್ಕರ್(24) ಎಂಬಾತನನ್ನು ಕೊಲೆಗೈಯಲಾಗಿದ್ದು, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್, ಶನಿವಾರ ಮಧ್ಯರಾತ್ರಿ ನಂತರ ಎಪಿ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ ಹೊಸೂರು ಬಳಿಯ ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದರು.

ಈ ಪ್ರಕರಣ ಸಂಬಂಧ ಮುನಿರಾಜು(24), ಮಾರುತಿ(22), ಮುನಿರಾಜು(24), ಮಾರುತಿ(22) ಎಂಬುವವರನ್ನು ಬಂಧಿಸಲಾಗಿದೆ. ಯುವಕನನ್ನು ಕೊಲೆ ಮಾಡಿದ ನಾಲ್ವರು ಆತನ ಶವವನ್ನು ಪೊಲೀಸ್ ಠಾಣೆಗೆ ತಂದಿದ್ದಾರೆ ಎಂದರು.

ಭಾಸ್ಕರ್, ಆರೋಪಿ ಮುನಿರಾಜು ಅಕ್ಕ ಸೀತಾಗೆ(ಹೆಸರು ಬದಲಿಸಲಾಗಿದೆ) ಹತ್ತಿರ ಆಗಲು ಪ್ರಯತ್ನಿಸುತ್ತಿದ್ದ. ಇದೇ ವಿಚಾರಕ್ಕೆ ಸೀತಾ ಮತ್ತು ಈಕೆಯ ಪತಿ ನಡುವೆ ಗಲಾಟೆಯಾಗುತ್ತಿತ್ತು. 15 ದಿನದ ಹಿಂದೆ ಸೀತಾ ಪತಿ ಮನೆ ಬಿಟ್ಟು ಬಂದು ಚಂದ್ರಶೇಖರ್ ಲೇಔಟ್‍ನಲ್ಲಿ ಬಂದು ವಾಸಿಸುತ್ತಿದ್ದಳು ಎನ್ನಲಾಗಿದೆ.

ಈ ಸಂದರ್ಭದಲ್ಲಿ ಭಾಸ್ಕರ್, ಸೀತಾಗೆ ಹತ್ತಿರವಾಗಿದ್ದು, ಇದರಿಂದ ಆಕ್ರೋಶಗೊಂಡ ಮುನಿರಾಜು, ಭಾಸ್ಕರ್‍ನನ್ನು ಕೆಬ್ಬೆಹಾಳಕ್ಕೆ ಕರೆದೊಯ್ದಿದ್ದು, ಹಲ್ಲೆ ಮಾಡಿದ್ದಾರೆ. ಈ ವೇಳೆ ಭಾಸ್ಕರ್ ಮೂರ್ಛೆ ಹೋಗಿದ್ದಾನೆ. ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ.

ಕೊಲೆ ಮಾಡಿದ ನಂತರ ಆರೋಪಿಗಳು ಆಟೊದಲ್ಲಿ ಭಾಸ್ಕರ್ ಶವದ ಜೊತೆ ಠಾಣೆಗೆ ಬಂದಿದ್ದಾರೆ. ಪೊಲೀಸ್ ಠಾಣೆಗೆ ಬಂದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News