ಬೆಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ

Update: 2021-10-18 07:00 GMT
photo: twitter@CMofKarnataka
 

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಭೇಟಿ ನೀಡಿದ್ದು, ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳನ್ನು ಇದೇ ವೇಳೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.  

ನಗರದ ಆಕ್ಸ್ಫರ್ಡ್ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ಮುಖ್ಯಮಂತ್ರಿ
ಬೊಮ್ಮಾಯಿ ವೀಕ್ಷಣೆ ಮಾಡಿ ಕಾಮಗಾರಿಯನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ನಗರದ ಜೆ.ಎಸ್.ಎಸ್ ಜಂಕ್ಷನ್ ನಲ್ಲಿರುವ ಬೃಹತ್ ಚರಂಡಿಯ ಕಾಮಗಾರಿ ವೀಕ್ಷಣೆ ಮಾಡಿರುವ ಸಿಎಂ, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಜೊತೆ ಚರ್ಚೆ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬಿಬಿಎಂಪಿ ಆಯುಕ್ತ  ಗೌರವ್ ಗುಪ್ತಾ, ಜಲಮಂಡಳಿ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News