ಚಿಕ್ಕಮಗಳೂರು: ರಸ್ತೆ ಬದಿಯಲ್ಲೇ ಮಾಂಸಕ್ಕಾಗಿ ಗೋಹತ್ಯೆ

Update: 2021-10-18 15:31 GMT

ಚಿಕ್ಕಮಗಳೂರು, ಅ.18: ರಸ್ತೆ ಬದಿಯಲ್ಲೇ ಗೋಹತ್ಯೆ ಮಾಡಿರುವ ಘಟನೆ ಇಲ್ಲಿನ ಎನ್,ಆರ್.ಪುರ ಪಟ್ಟಣ ಸಮೀಪದಲ್ಲಿ ನಡೆದಿದೆ. 

ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಗಳನ್ನು ಪ್ರಿನ್ಸ್, ಅಭಿಲಾಷ್, ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಎನ್.ಆರ್.ಪುರ ಪಟ್ಟಣ ಹೊರವಲಯದಲ್ಲಿ ಈ ಮೂವರು ಆರೋಪಿಗಳು ರವಿವಾರ ರಾತ್ರಿ ಹಸುವೊಂದನ್ನು ಮಾಂಸಕ್ಕಾಗಿ ಕಡಿದಿದ್ದು, ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರಿಂದ ಮಾಂಸವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರೆಂದು ತಿಳಿದು ಬಂದಿದೆ.

ಸ್ಥಳೀಯರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಪಿಎಸ್ಸೈ ದಿಲೀಪ್ ರಾಜ್ ನೇತೃತ್ವದಲ್ಲಿ  ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಪ್ರಿನ್ಸ್, ಅಭಿಲಾಶ್, ಪ್ರಜ್ವಲ್ ಎಂಬವರನ್ನು ಬಂಧಿಸಿದ್ದಾರೆಂದು ತಿಳಿದು ಬಂದಿದೆ.

ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News