ಜಾಲ್ಸೂರು: ಕಾರು ಪಲ್ಟಿ- ಮೂವರಿಗೆ ಗಾಯ
Update: 2021-10-18 17:04 GMT
ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಸೋಮವಾರ ಸಂಭವಿಸಿದೆ.
ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಕಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾಯಿತೆನ್ನಲಾಗಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಕರಿದ್ದರು. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.