ಮಡಿಕೇರಿ: ಮತಾಂತರ ಆರೋಪ; ಓರ್ವ ಪೊಲೀಸ್ ವಶಕ್ಕೆ

Update: 2021-10-18 18:24 GMT

ಮಡಿಕೇರಿ, ಅ.18: ಆದಿವಾಸಿಗಳ ಮತಾಂತರ ಆರೋಪದಲ್ಲಿ ಓರ್ವವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ರವಿವಾರ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಮಾಲಂಬಿ ಎಂಬಲ್ಲಿ ವರದಿಯಾಗಿದೆ. ಸೋಮವಾರ ಬೆಳಕಿಗೆ ಬಂದಿದೆ.
 
ಮಾಲಂಬಿಯ ಗಿರಿಜನ ಹಾಡಿ ನಿವಾಸಿ ಮಂಜು ಪೊಲೀಸ್ ವಶಕ್ಕೆ ಪಡೆದ ಆರೋಪಿ ಎಂದು ತಿಳಿದು ಬಂದಿದೆ. ಈತ ತನ್ನ ಮನೆಯಲ್ಲಿ ಸ್ಥಳೀಯರನ್ನು ಸೇರಿಸಿಕೊಂಡು ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಗುಂಪೊಂದು ಏಕಾಏಕಿ ಮನೆಗೆ ನುಗ್ಗಿ ರಾಜು ಮತ್ತು ಆತನ ಕುಟುಂಬವನ್ನು ತರಾಟೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. ಹಾಡಿಯ ಜನರನ್ನು ಅಕ್ರಮವಾಗಿ ಮತಾಂತರ ಮಾಡುತ್ತಿರುವುದಾಗಿ ಸಂಘಟನೆಯ ಕಾರ್ಯಕರ್ತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಶನಿವಾರಸಂತೆ ಪೊಲೀಸ್ ಠಾಣೆಯ ಪೊಲೀಸರು ಆರೋಪಿ ರಾಜುವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
 
 ಈ ವೇಳೆ ಆತನ ಮನೆಯಲ್ಲಿ ಧಾರ್ಮಿಕ ಪುಸ್ತಕಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಆರೋಪಿ ಮಂಜು, ಆತನ ಪತ್ನಿ ಹಾಗೂ ಇಬ್ಬರು ಮಕ್ಕಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಶನಿವಾರಸಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News