ದತ್ತಿ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಅಹ್ವಾನ

Update: 2021-10-19 18:21 GMT

ಬೆಂಗಳೂರು, ಅ.19: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡುವ 2019, 2020 ಮತ್ತು 2021ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಳಾದ ಅಭಿಮಾನಿ ಪ್ರಶಸ್ತಿ ಮತ್ತು ಮೈಸೂರು ದಿಗಂತ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾಜಿಕ ಸಮಸ್ಯೆಗಳನ್ನು ಪ್ರತಿನಿಧಿಸುವ ಅತ್ಯುತ್ತಮ ಲೇಖನಕ್ಕೆ ಅಭಿಮಾನಿ ಪ್ರಶಸ್ತಿ-2019, 2020 ಹಾಗೂ 2021ನೇ ಸಾಲಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಇದೇ ರೀತಿ 2019, 2020 ಮತ್ತು 2021ನೇ ಸಾಲಿನಲ್ಲಿ ಪ್ರಕಟವಾದ ಮಾನವೀಯ ಸಮಸ್ಯೆಗಳ ಲೇಖನಗಳಿಗೆ ಮೈಸೂರು ದಿಗಂತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಒಂದಕ್ಕಿಂತ ಹೆಚ್ಚಿನ ಲೇಖನಗಳಿದ್ದರೆ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ. ಕನ್ನಡ ದೈನಿಕ, ಟಿವಿ ವಾಹಿನಿ ಮತ್ತು ವಾರ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ತಮ್ಮ ಲೇಖನಗಳನ್ನು, ಪತ್ರಿಕೆ ಸಂಪಾದಕರಿಂದ ದೃಢೀಕರಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಕಳುಹಿಸಿಕೊಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-01 ಇಲ್ಲಿಗೆ ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News