ಬದಿಯಡ್ಕ: ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
Update: 2021-10-20 11:13 IST
ಕಾಸರಗೋಡು, ಅ.20: ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕನೋರ್ವನ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ಎಂಬಲ್ಲಿಂದ ವರದಿಯಾಗಿದೆ.
ಮುಂಡ್ಯತ್ತಡ್ಕದ ಜನಾರ್ದನ(34) ಮೃತಪಟ್ಟವರು. ಸೋಮವಾರ ಸಂಜೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ದನ ಬಳಿಕ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು. ಇಂದು ಬೆಳಗ್ಗೆ ಮನೆಯಿಂದ ಅಲ್ಪ ದೂರದ ಗೇರು ಮರದ ರೆಂಬೆಗೆ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಜನಾರ್ದನರ ಮೃತದೇಹ ಪತ್ತೆಯಾಗಿದ್ದಾರೆ.
ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.