ಬಿಎಸ್‌ಎಫ್‌ ಸೇನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಕೇಂದ್ರ ಸಚಿವ ಅಜಯ್‌ ಮಿಶ್ರಾ

Update: 2021-10-20 13:40 GMT

ಹೊಸದಿಲ್ಲಿ: ಇತ್ತೀಚೆಗೆ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಎಂಬಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಎಸ್‍ಯುವಿ ಒಂದು ಹರಿದ ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟ ಘಟನೆ ಸಂಬಂಧ ಕೇಂದ್ರ ಗೃಹ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ಜೈಲು ಪಾಲಾಗಿದ್ದರೆ,  ಸಚಿವರು ಮಾತ್ರ ರಾಜೀನಾಮೆ ನೀಡಬೇಕೆಂಬ ವಿಪಕ್ಷಗಳ ಆಗ್ರಹಕ್ಕೆ ತಲೆಬಾಗಿಲ್ಲ. ಕೇಂದ್ರ ಸರಕಾರವೂ ಈ ಕುರಿತು ಯಾವ ನಿರ್ಧಾರಗಳನ್ನೂ ಕೈಗೊಂಡಿಲ್ಲ. 

ಇದೀಗ ಅವರು  ಈ ವಾರ ನಡೆಯಲಿರುವ ಬಿಎಸ್‍ಎಫ್ ಆಯೋಜಿಸಲಿರುವ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ತವ್ಯದ ವೇಳೆ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ.

ದಿಲ್ಲಿಯ ಚಾಣಕ್ಯಪುರಿ ಪ್ರದೇಶದಲ್ಲಿರುವ ನ್ಯಾಷನಲ್ ಪೊಲೀಸ್ ಮೆಮೋರಿಯಲ್‍ನಲ್ಲಿ ಈ ಕಾರ್ಯಕ್ರಮ ಅಕ್ಟೋಬರ್ 23ರಂದು ನಡೆಯಲಿದೆ.

ಸಂಜೆ ನಡೆಯಲಿರುವ ಶಹೀದ್ ಸಮ್ಮಾನ್ ಪೆರೇಡ್‍ನಲ್ಲಿಯೂ ಸಚಿವರು ಭಾಗವಹಿಸಿ ಸ್ಮಾರಕದಲ್ಲಿ ಪುಷ್ಪಗುಚ್ಛ ಇರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News