ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟದ ಅಧ್ಯಕ್ಷರಾಗಿ ಕುಮಾರ್ ಸುವರ್ಣ

Update: 2021-10-20 14:19 GMT

ಉಡುಪಿ, ಅ.20: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಬೈಕಾಡಿ ಗ್ರಾಪಂ ವ್ಯಾಪ್ತಿಯ ಕುಮಾರ್ ಸುವರ್ಣ ಅವರನ್ನು ಜಿಲ್ಲಾಧ್ಯಕ್ಷ ಸಂಕಪ್ಪ ಎ. ನೇಮಕ ಮಾಡಿದ್ದಾರೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಸೂಚನೆಯಂತೆ, ಹಿಂದುಳಿದ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ್ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಅಧ್ಯಕ್ಷ ಸಂಕಪ್ಪಯ್ಯ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಉಪಾಧ್ಯಕ್ಷೆಯಾಗಿ ದೇವಕಿ ಪುಜಾರ್ತಿ, ಕಾರ್ಯದರ್ಶಿಯಾಗಿ ಉದಯ ಸುವರ್ಣ, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಸದಸ್ಯರುಗಳಾಗಿ ವಿಜಯ ಪೂಜಾರಿ, ವಿಠಲ ಪೂಜಾರಿ, ಅನುಷಾ ಅವರನ್ನು ನೇಮಕಗೊಳಿಸಲಾಗಿದೆ ಎಂದು ಸಂಕಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News