​ನ.8: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ

Update: 2021-10-21 10:08 GMT

ಮಂಗಳೂರು, ಅ.21: ಅಕ್ಷರ ಸಂತ  ಹರೇಕಳ ಹಾಜಬ್ಬ ಅವರಿಗೆ ನ.8ರಂದು ಹೊಸದಿಲ್ಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ ಹಾಜಬ್ಬ ನ.7 ವಿಮಾನದಲ್ಲಿ ಬೆಂಗಳೂರು ಅಥವಾ ಮುಂಬೈ ಮೂಲಕ ದಿಲ್ಲಿಗೆ ತೆರಳಿ, 8 ರಂದು ಹೊಸದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಲಿದ್ದೇನೆ ಎಂದು ತಿಳಿಸಿದ್ದಾರೆ.

2020ರ ಜನವರಿಯಲ್ಲಿ ಗಣರಾಜ್ಯೋತ್ಸವ ಸಂದರ್ಭ ಪದ್ಮಶ್ರೀ ಪುರಸ್ಕಾರ ಘೋಷಿಸಿ, ಮಾರ್ಚ್‌ ನಲ್ಲಿ ಪ್ರದಾನ ಮಾಡುವ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್‌ನಿಂದಾಗಿ ಲಾಕ್‌ ಡೌನ್ ಘೋಷಿಸಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News